ಬ್ರೇಕಿಂಗ್ ನ್ಯೂಸ್
10-09-24 12:17 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೆ.12 ಡೆಡ್ ಲೈನ್ ಆಗಲಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಗಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇನ್ನೊಂದು ಸಿಟ್ಟಿಂಗಲ್ಲಿ ಮುಗಿಸುವ ಸುಳಿವನ್ನು ನ್ಯಾ. ಎಂ.ನಾಗಪ್ರಸನ್ನ ನೀಡಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ಪಾಲಿಗೆ ಗುರುವಾರದ ತೀರ್ಪು ಮಹತ್ವದ್ದಾಗಲಿದೆ. ಈ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ''ಇದು 22 ವರ್ಷಕ್ಕಿಂತ ಹಳೆಯ ಪ್ರಕರಣವಾಗಿದ್ದು ಪ್ರಾಥಮಿಕ ತನಿಖೆ ಅಗತ್ಯವಿದೆ. 17ಎ ಅಡಿ ಪ್ರಾಸಿಕ್ಯೂಷನ್ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಆದರೆ ರಾಜ್ಯಪಾಲರು ಪ್ರಾಥಮಿಕ ತನಿಖೆಯೇ ಇಲ್ಲದೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದು ಸರಿಯಲ್ಲ ಎಂದರು. ಅರ್ಜಿದಾರರ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಉತ್ತರಿಸಲು ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ. ಇದೇ ವೇಳೆ, ಅದೇ ದಿನ ವಿಚಾರಣೆ ಮುಕ್ತಾಯಗೊಳಿಸಲಾಗುವುದು ಎಂದು ನ್ಯಾಯಪೀಠ ಹೇಳಿರುವುದು ವಿಶೇಷ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್, ''ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆ ನಡೆದಿವೆ. ಪತ್ನಿಗೆ ಬೇರೆ ಆದಾಯದ ಮೂಲಗಳಿರಲಿಲ್ಲ. ಆದಾಯ ತೆರಿಗೆ ರಿಟರ್ನ್ ಅನ್ನು ಪತ್ನಿ ಫೈಲ್ ಮಾಡಿಲ್ಲ. ಹಾಗಾಗಿ ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದೇ ಪರಿಗಣಿಸಬೇಕಾಗುತ್ತದೆ. ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದರು.
The Karnataka High Court Bench hearing Chief Minister Siddaramaiah’s case against Governor Thaawar Chand Gehlot, on Monday adjourned the hearing to September 12. The Bench, headed by Justice M Nagaprasanna was looking into the writ petition filed by CM Siddaramaiah challenging the prosecution order against him by Governor Gehlot.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm