ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm