ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm