ಬ್ರೇಕಿಂಗ್ ನ್ಯೂಸ್
10-09-24 03:05 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ನಟಿ ಪವಿತ್ರಾ ಗೌಡ ಮತ್ತು ನಟ ದರ್ಶನ್ ನಡುವೆ ಯಾವ ರೀತಿಯ ಸಂಬಂಧ ಇತ್ತೆಂಬುದನ್ನು ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ರಿವೀಲ್ ಮಾಡಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.4ರಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು ಸ್ವತಃ ದರ್ಶನ್ ನಮ್ಮಿಬ್ಬರ ನಡುವೆ ಲಿವಿಂಗ್ ರಿಲೇಶನ್ಶಿಪ್ ಇತ್ತೆಂದು ಹೇಳಿಕೊಂಡಿರುವುದನ್ನು ಪೊಲೀಸರು ಉಲ್ಲೇಖಿಸಿದ್ದಾರೆ.
ನಟಿ ಪವಿತ್ರಾ ಗೌಡ ಕೂಡ ಇದೇ ಮಾತುಗಳನ್ನೇ ಹೇಳಿದ್ದಾರೆ. ಆದರೆ, ಇಬ್ಬರ ನಡುವೆ ಸಂಬಂಧ ಬೆಳೆದಿದ್ದು ಹೇಗೆ? ಯಾರು ಮೊದಲು ಈ ರೀತಿಯ ಸಂಬಂಧಕ್ಕೆ ಮುಂದಾದರು ಎಂಬುದಕ್ಕೂ ಚಾರ್ಜ್ಶೀಟ್ನಲ್ಲಿ ಉತ್ತರ ಸಿಕ್ಕಿದೆ. ಕೋರ್ಟಿಗೆ ಸಲ್ಲಿಸಿರುವ 3991 ಪುಟಗಳ ಚಾರ್ಜ್ ಶೀಟ್ನಲ್ಲಿ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್ ಸ್ವಇಚ್ಛಾ ಹೇಳಿಕೆಗಳನ್ನು ನೀಡಿದ್ದಾರೆ. ಪವಿತ್ರಾ ಗೌಡ ನೀಡಿರುವ ಹೇಳಿಕೆಯಲ್ಲಿ ದರ್ಶನ್ ಜತೆಗಿನ ಸಂಬಂಧ ಹೇಗೆ ಶುರುವಾಯ್ತು? ಮನೆ ಯಾವಾಗ ಖರೀದಿ ಮಾಡಲಾಯಿತು ಮತ್ತು ರೇಣುಕಾಸ್ವಾಮಿ ಕೊಲೆಗೂ ಮುಂಚೆ ಏನೇನು ನಡೆಯಿತು ಎಂಬಿತ್ಯಾದಿ ರೋಚಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ.
ದರ್ಶನ್ ಜತೆಗಿನ ಸಂಬಂಧದ ಬಗ್ಗೆ ಹೇಳಿಕೊಂಡಿರುವ ಪವಿತ್ರಾ ಗೌಡ, ನಾನು ಮತ್ತು ದರ್ಶನ್ ಪರಸ್ಪರ ಪ್ರೀತಿಸುತ್ತಿದ್ದೆವು. ದರ್ಶನ್ಗೆ ಮೊದಲೇ ವಿಜಯಲಕ್ಷ್ಮೀ ಅವರೊಂದಿಗೆ ಮದುವೆಯಾಗಿ ಮಗ ಇರುವುದು ಗೊತ್ತಿರಲಿಲ್ಲ. ಪ್ರೀತಿಸಲು ಶುರು ಮಾಡಿದ ಬಳಿಕ ಆ ಬಗ್ಗೆ ಗೊತ್ತಾಯಿತು. 2014ರಲ್ಲಿ ಬುಲ್ಬುಲ್ ಚಿತ್ರದ ಆಡಿಷನ್ಗೆ ಹೋಗಿದ್ದಾಗ ಮೊದಲ ಬಾರಿಗೆ ದರ್ಶನ್ ಪರಿಚಯ ಆಗಿತ್ತು. ಈ ವೇಳೆ ಮ್ಯಾನೇಜರ್ ಅವರಿಂದ ದರ್ಶನ್ ನಂಬರ್ ಪಡೆದಿದ್ದೆ. ಆಡಿಷನ್ ವಿಚಾರವಾಗಿ ಫೋನ್ ಮಾಡಿದಾಗ, ಈಗಾಗಲೇ ಆಡಿಷನ್ ಮುಗಿದಿದೆ ಎಂದರು. ಅಲ್ಲದೆ, ಬೇರೆ ಯಾವುದಾದರೂ ಚಿತ್ರವಿದ್ದರೆ ತಿಳಿಸುವುದಾಗಿ ಹೇಳಿದರು. ನಾನು ಅದನ್ನೇ ನೆಪವಾಗಿಟ್ಟು ದರ್ಶನ್ ಅವರನ್ನು ಆಗಾಗ ಫೋನ್ ಮತ್ತು ಮೆಸೇಜ್ ಮೂಲಕ ಸಂಪರ್ಕಿಸುತ್ತಿದ್ದೆ. ದಿನಗಳು ಕಳೆದಂತೆ ಚಾಟಿಂಗ್ ಮತ್ತು ಫೋನ್ ಕರೆ ಮಾಡಿ ಮಾತನಾಡುತ್ತಿದ್ದೆವು. ಅಲ್ಲದೆ, ಆಗಾಗ ಇಬ್ಬರು ಭೇಟಿಯಾಗುತ್ತಿದ್ದೆವು ಎಂದು ಪವಿತ್ರಾ ಗೌಡ ನೀಡಿರುವ ಹೇಳಿಕೆಯಲ್ಲಿದೆ.
ನಾನು ವಾಸ ಮಾಡುತ್ತಿದ್ದ ಮನೆಗೆ ಆಗಾಗ ದರ್ಶನ್ ಬರುತ್ತಿದ್ದರು. ಇಬ್ಬರು ಕೂಡ ಲಾಂಗ್ ಡ್ರೈವ್ ಹೋಗುತ್ತಿದ್ದೆವು. ಒಟ್ಟಿಗೆ ವಾಸ ಮಾಡುವ ಉದ್ದೇಶದಿಂದ ಆರ್ಆರ್ ನಗರದಲ್ಲಿ ನನಗಾಗಿ ದರ್ಶನ್ ಮನೆ ಖರೀದಿ ಮಾಡಿದ್ದರು. ನಾನು, ನನ್ನ ಮಗಳು ಮತ್ತು ದರ್ಶನ್ ಅಲ್ಲಿ ಇರುತ್ತಿದ್ದೆವು. ಮನೆಯನ್ನು ನನ್ನ ಹೆಸರಿನಲ್ಲೇ ಖರೀದಿ ಮಾಡಿದ್ದಾರೆ. ಇದಕ್ಕಾಗಿ ನಿರ್ಮಾಪಕ ಸೌಂದರ್ಯ ಜಗದೀಶ್ ಬಳಿ 1.75 ಕೋಟಿ ರೂ. ಹಣವನ್ನು ಪಡೆದಿದ್ದರು. 2018ರ ಫೆಬ್ರವರಿ ತಿಂಗಳಲ್ಲಿ ಮನೆಯ ಗೃಹಪ್ರವೇಶ ಮಾಡಿ ಅಲ್ಲೇ ವಾಸವಿದ್ದೆವು.
2013ರಲ್ಲಿ ನಾನು ನನ್ನ ವೈಯಕ್ತಿಕ ಹಾಗೂ ಮಾಡೆಲಿಂಗ್ ವಿಚಾರ ಹಂಚಿಕೊಳ್ಳಲು ಇನ್ಸ್ಟಾಗ್ರಾಮ್ ಖಾತೆ ತೆರೆದಿದ್ದೆ. ದರ್ಶನ್ ಕೊಡಿಸಿದ ಐಫೋನ್ ಮ್ಯಾಕ್ಸ್-14 ಮೊಬೈಲ್ನಿಂದಲೇ ಖಾತೆ ನಿರ್ವಹಣೆ ಮಾಡುತ್ತಿದ್ದೆ. ನನ್ನ ಖಾತೆಯನ್ನು ಅನೇಕ ನೆಟ್ಟಿಗರು ಫಾಲೋ ಮಾಡುತ್ತಿದ್ದರು. ಖಾತೆ ಪಬ್ಲಿಕ್ ಆಗಿದ್ದರಿಂದ ನೆಟ್ಟಿಗರು ನೇರವಾಗಿ ಮೆಸೇಜ್ ಮಾಡುತ್ತಿದ್ದರು. ಕೆಲವೊಮ್ಮೆ ಇನ್ಬಾಕ್ಸ್ ತೆರೆದು ನೋಡಿದಾಗ ಅಸಭ್ಯ ರೀತಿಯ ಮೆಸೇಜ್ ಕಳಿಸಿರುತ್ತಿದ್ದರು. ಅಂತಹ ನೆಟ್ಟಿಗರ ಪ್ರೊಫೈಲ್ಗಳನ್ನು ಬ್ಲಾಕ್ ಮಾಡುತ್ತಿದ್ದೆ. ಕೆಲವೊಮ್ಮೆ ಅಸಹ್ಯಕರ ಮೆಸೇಜ್ಗಳು ಬಂದಾಗ ಸ್ಕ್ರೀನ್ ಶಾಟ್ ತೆಗೆದು ದರ್ಶನ್ ಅವರಿಗೂ ತೋರಿಸುತ್ತಿದ್ದೆ ಎಂದು ಪವಿತ್ರಾ ಗೌಡ ಹೇಳಿರುವುದು ಚಾರ್ಜ್ಶೀಟ್ನಲ್ಲಿ ದಾಖಲಾಗಿದೆ.
ಅಂದಹಾಗೆ ಇನ್ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಮಾಡಿರುವ ಸಂಪೂರ್ಣ ಮೆಸೇಜ್ಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. 'Goutham_KS_1990' ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ, ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ಗಳನ್ನು ಮಾಡಿದ್ದ ಎಂದು ತಿಳಿದುಬಂದಿದೆ. ಕಿಡ್ನಾಪ್ ಆಗುವ 8 ದಿನಗಳಿಗೂ ಮುಂಚೆ ಪವಿತ್ರಾ ಗೌಡಳ pavitragowda777_official ಹೆಸರಿನ ಅಧಿಕೃತ ಇನ್ಸ್ಟಾಗ್ರಾಂ ಖಾತೆಗೆ ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ. ದರ್ಶನ್ರನ್ನು ಬಿಟ್ಟು ತನ್ನ ಜೊತೆ ಇರುವಂತೆ ಪಟ್ಟು ಹಿಡಿದಿದ್ದ. ಅಲ್ಲದೆ, ಪವಿತ್ರಾಳ ದೇಹದ ಬಗ್ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ನಾನು ನಿಮ್ಮ ಅಭಿಮಾನಿ ಎಂದು ಹೇಳಿಕೊಂಡು, ಆಕೆಯನ್ನು ಲೈಂಗಿಕ ಬಯಕೆ ಈಡೇರಿಸುವಂತೆ ಆಹ್ವಾನಿಸಿದ್ದ. ಇದಿಷ್ಟೇ ಅಲ್ಲದೆ, ತನ್ನ ಮರ್ಮಾಂಗದ ಫೋಟೋ ಸೇರಿದಂತೆ ತನ್ನ ಅನೇಕ ಫೋಟೋಗಳನ್ನು ಪವಿತ್ರಾಗೆ ಕಳುಹಿಸಿದ್ದ ಎಂದು ಚಾರ್ಜ್ಶೀಟ್ ಉಲ್ಲೇಖಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
The chargesheet against disgraced Kannada star Darshan has yielded one shocking revelation after the other. The ‘Majestic’ actor is now languishing behind bars for the murder of Renukaswamy, a 33-year-old auto driver. Pavithra Gowda, his alleged girlfriend, has been named as the ‘root cause’ behind the murder in the 3,991-page chargesheet.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm