ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm