ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm