ಬ್ರೇಕಿಂಗ್ ನ್ಯೂಸ್
11-09-24 10:11 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 11: ಅಧಿಕಾರ ಪ್ರಭಾವ ಬಳಸಿ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿ ಅಕ್ರಮವಾಗಿ 1.5 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪದಡಿ ಓರ್ವ ಮಹಿಳೆ ಸೇರಿ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೀವನ್ ಭೀಮಾನಗರದ ಜಿ.ಎಂ. ಪಾಳ್ಯದಲ್ಲಿ ನೆಲೆಸಿರುವ ಉದ್ಯಮಿ ಕೇಶವ್ ತಕ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಜಿಎಸ್ಟಿ ವಿಭಾಗದಲ್ಲಿ ಗುಪ್ತಚರ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್, ಮನೋಜ್, ನಾಗೇಶ್ ಬಾಬು ಹಾಗೂ ಸೋನಾಲಿ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಿದ್ದಾರೆ.
ಜೀವನ್ ಭೀಮಾನಗರದಲ್ಲಿ ಮೆಕ್ಸೊ ಸಲ್ಯೂಷನ್ ಪ್ರೈವೇಟ್ ಕಂಪನಿ ನಡೆಸುತ್ತಿದ್ದ ಕೇಶವ್ ತಕ್ ಮನೆಗೆ ಕಳೆದ ಆಗಸ್ಟ್ 31ರಂದು ಆರೋಪಿಗಳು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಜಿಎಸ್ಟಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಬಂದಿದ್ದಾರೆ. ಏಕಾಏಕಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನ ವಶಪಡಿಸಿಕೊಂಡು ಅಕ್ರಮವಾಗಿ ಕಂಪನಿ ನಡೆಸುತ್ತಿದ್ದೀರಾ ಎಂದು ಆರೋಪಿಸಿ ಕೇಶವ್ ಮನೆಯಲ್ಲಿದ್ದ ಪವನ್, ಮುಖೇಶ್, ರಾಕೇಶ್ ಅವರನ್ನು ಬಲವಂತವಾಗಿ ಎಳೆದುಕೊಂಡು ಎರಡು ಕಾರಿನಲ್ಲಿ ಕೂರಿಸಿದ್ದರು
ಕಚೇರಿ ವಿಳಾಸಕ್ಕೆ ಕರೆತಂದು ಹಲ್ಲೆ ಮಾಡಿ ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿದ್ದರು. ಹಿರಿಯ ಜಿಎಸ್ಟಿ ಅಧಿಕಾರಿ ಎಂದು ಪರಿಚಯಿಸಿಕೊಂಡ ಮನೋಜ್, ಇಂದಿರಾನಗರಕ್ಕೆ ಕೇಶವ್ನನ್ನ ಕರೆದೊಯ್ದಿದ್ದ. ಸ್ನೇಹಿತ ರೋಷನ್ ಜೈನ್ಗೆ ವಾಟ್ಸ್ಆ್ಯಪ್ ಕರೆ ಮಾಡಿಸಿ 3 ಕೋಟಿ ರೂಪಾಯಿ ತರುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದರು. ಸ್ನೇಹಿತನಿಗೆ 3 ಕೋಟಿ ಒಗ್ಗೂಡಿಸಲು ಸಾಧ್ಯವಾಗಿರಲಿಲ್ಲ. ಸೆ.1ರ ಮುಂಜಾನೆ 2.30ರ ವೇಳೆ ಹೇಗೋ 1.50 ಕೋಟಿ ರೂ.ಹಣ ಹೊಂದಿಸಿದ್ದ. ಆರೋಪಿತ ಅಧಿಕಾರಿಗಳು ಒಂದೂವರೆ ಕೋಟಿ ಹಣ ಪಡೆದು ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉದ್ಯಮಿ ವಿವರಿಸಿದ್ದರು.
1.50 ಕೋಟಿ ಹಣ ವಸೂಲಿ ಬಗ್ಗೆ ನೈಜತೆ ಬಗ್ಗೆ ಅರಿಯಲು ಉದ್ಯಮಿ ಪರಿಶೀಲಿಸಿದಾಗ ಜಿಎಸ್ಟಿ ಅಧಿಕಾರಿಗಳೇ ಹಣ ಸುಲಿಗೆ ಮಾಡಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿ ಬಂಧಿಸಿದ್ದ ಬೈಯಪ್ಪನಹಳ್ಳಿ ಪೊಲೀಸರು ನಗರ ಪೊಲೀಸ್ ಆಯುಕ್ತರ ಆದೇಶ ಮೇರೆಗೆ ಪ್ರಕರಣವನ್ನ ಸಿಸಿಬಿಗೆ ಹಸ್ತಾಂತರಿಸಿರುವುದಾಗಿ ಪೊಲೀಸ್ ಕಮಿಷನರ್ ವಿವರಿಸಿದರು
Bengalore central crime branch (CCB) police have arrested four officials of the GST Intelligence, Bengaluru Zonal Unit of Central GST on charges of conducting an unauthorized raid on a business in Bengaluru and extorting Rs 1.5 crore in cash on September 1, after introducing themselves as senior GST and Enforcement Directorate (ED) officials.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm