ಬ್ರೇಕಿಂಗ್ ನ್ಯೂಸ್
15-09-24 01:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಪಕ್ಷದಲ್ಲಿ ಬಣ ರಾಜಕಾರಣ ಪ್ರಾಬಲ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಮೂಗುದಾರ ಹಾಕಲು ಆರೆಸ್ಸೆಸ್ ಮುಂದಾಗಿದೆ. ಪಕ್ಷ ಮತ್ತು ಸಂಘಟನೆಯನ್ನು ಹಿಡಿತಕ್ಕೆ ತರಲು ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ್ಶಿಯನ್ನು ನಿಯೋಜನೆ ಮಾಡುವುದಕ್ಕೆ ಆರ್ಎಸ್ ಎಸ್ ಚಿಂತನೆ ನಡೆಸಿದೆ.
ಒಂದು ವರ್ಷದ ಹಿಂದಷ್ಟೆ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿದ್ದ ಪುತ್ತೂರು ಮೂಲದ ಜಿ.ವಿ.ರಾಜೇಶ್ ಅವರನ್ನು ಸಂಘ ಪರಿವಾರ ಅನಿರೀಕ್ಷಿತ ಎನ್ನುವಂತೆ ವಾಪಸ್ ಕರೆಸಿಕೊಂಡಿತ್ತು. ಅವರನ್ನು ನಿಯೋಜಿಸಿದಷ್ಟೇ ವೇಗವಾಗಿ ವಾಪಸ್ ಕರೆಸಿಕೊಂಡಿದ್ದು ಬಿಜೆಪಿ ಒಳಗಡೆ ತೀವ್ರ ಚರ್ಚೆಗೂ ಕಾರಣವಾಗಿತ್ತು. ಅದಾಗಿ ಎರಡು ತಿಂಗಳು ಕಳೆದರೂ ಆ ಸ್ಥಾನ ತುಂಬುವ ಸುಳಿವು ಇರಲಿಲ್ಲ. ಅಲ್ಲದೆ, ಪಕ್ಷದ ಸಂಘಟನಾತ್ಮಕ ನೆಲೆಯಲ್ಲಿ ಮಾಡಿಕೊಂಡಿದ್ದ ವಿಭಾಗೀಯ ಕಾರ್ಯದರ್ಶಿ ಹುದ್ದೆಯನ್ನೂ ಖಾಲಿ ಬಿಡಲಾಗಿತ್ತು.
ಬಿಜೆಪಿ ಉನ್ನತ ಮೂಲಗಳ ಪ್ರಕಾರ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸದ್ಯಕ್ಕೆ ಹೊಸತಾಗಿ ನೇಮಕ ಮಾಡದಿರಲು ಸಂಘದ ಹಿರಿಯರು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ನಾಯಕರ ಮಧ್ಯೆ ಎದ್ದಿರುವ ಭಿನ್ನಮತ, ವಿರೋಧಿ ಹೇಳಿಕೆಗಳ ಕಾರಣದಿಂದ ಪಕ್ಷಕ್ಕೆ ಮುಜುಗರ ಆಗುತ್ತಿರುವುದು ಮತ್ತು ಪಕ್ಷದ ಒಳಗಡೆ ಎಡವಟ್ಟು ಆಗಿರುವುದು ಇವನ್ನೆಲ್ಲ ನಿಗಾ ಇಡಲು ಹಿರಿಯರೊಬ್ಬರ ಅಗತ್ಯವಿದೆ ಎಂಬ ನಿಲುವಿಗೆ ಸಂಘದ ಪ್ರಮುಖರು ಬಂದಿದ್ದಾರೆ. ಜತೆಗೆ ಸಂಘಟನಾತ್ಮಕ ನೆಲೆಯಲ್ಲೂ ಬಿಜೆಪಿ ಬಲ ಕುಸಿತ ಆಗುತ್ತಿರುವುದರಿಂದ ಆರೆಸ್ಸೆಸ್ ಆತಂಕಗೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಂಘದ ಹಿರಿಯರು ಬೇಸರವನ್ನೂ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ನಾಯಕರ ಸಮನ್ವಯ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ನಾಯಕರು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದರು. ಬಹಿರಂಗವಾಗಿಯೇ ಮಾತನಾಡುತ್ತಿರುವ ಯತ್ನಾಳ್, ರಮೇಶ್ ಜಾರಕಿಹೊಳಿ ವಿಜಯೇಂದ್ರ ಬಗ್ಗೆ ಆರೋಪಗಳ ಸುರಿಮಳೆ ಮಾಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ದೆಹಲಿಗೆ ತೆರಳಿದ್ದು ರಾಜ್ಯದ ಬೆಳವಣಿಗೆ ಬಗ್ಗೆ ದೆಹಲಿ ನಾಯಕರಿಗೆ ಮನವರಿಕೆ ಮಾಡುವ ಪ್ರಯತ್ನಪಟ್ಟಿದ್ದರು.
Possibility of appointment of organizing secretary again for state BJP, RSS thought to avoid factionalism.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm