ಬ್ರೇಕಿಂಗ್ ನ್ಯೂಸ್
19-09-24 08:07 pm HK News Desk ಕರ್ನಾಟಕ
ಧಾರವಾಡ, ಸೆ.19: ಆ ಪಕ್ಷ ಈ ಪಕ್ಷ ಅಂತಲ್ಲ, ಎಲ್ಲ ಪಕ್ಷಗಳಿಂದಲೂ ಭ್ರಷ್ಟಾಚಾರ ಆಗ್ತಾ ಇದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕು. ಈ ರೀತಿ ಭ್ರಷ್ಟಾಚಾರ ನಡೆದರೆ ನಮ್ಮ ಆರ್ಥಿಕ ಪರಿಸ್ಥಿತಿ ಏನಾಗಬಹುದು. ಇದರಿಂದ ಕಷ್ಟ ಪಡುವವರು ಮಧ್ಯಮ ಮತ್ತು ಕೆಳವರ್ಗದವರು. ಹೀಗಾದರೆ ಪ್ರಜಾಪ್ರಭುತ್ವ ಉಳಿಯಲ್ಲ ಎನ್ನೋದು ನನ್ನ ಭಾವನೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಭ್ರಷ್ಟಾಚಾರ ಮಿತಿಮೀರಿದರೆ ದೊಡ್ಡ ಕ್ರಾಂತಿ ಆಗಬಹುದು, ಅದು ನಮಗೆ ಬೇಡ. ಹೀಗಾಗಿ ಭ್ರಷ್ಟಾಚಾರ ತಡೆಗಟ್ಟುವ ಕೆಲಸ ನಡೆಯಬೇಕು. ಅಭಿವೃದ್ಧಿ ಕೆಲಸ ಆಗುತ್ತಿವೆ, ಆದರೆ ಅದು ಸಾರ್ವಜನಿಕ ಹಿತಾಸಕ್ತಿಗಲ್ಲ. ರಾಜಕಾರಣಿಗಳು ತಮ್ಮ ಅಭಿವೃದ್ಧಿಯನ್ನಷ್ಟೆ ಮಾಡುತ್ತಿದ್ದಾರೆ. ಹಿಂದೆ ಇದ್ದ ಸರ್ಕಾರವನ್ನು ಇವತ್ತು ಅಧಿಕಾರದಲ್ಲಿರುವವರು ಶೇ.40 ಸರ್ಕಾರ ಎಂದು ಕರೆಯುತ್ತಿದ್ದರು. ಈಗ ಈ ಸರ್ಕಾರದಲ್ಲು ವಾಲ್ಮೀಕಿ ನಿಗಮದ ಹಗರಣ ನಡೆದಿದೆ. ಹೀಗಾಗಿ ಭ್ರಷ್ಟಾಚಾರ ಒಂದೇ ಪಕ್ಷಕ್ಕೆ ಸೀಮಿತವಲ್ಲ ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ರಾಜಕೀಯಕ್ಕೆ ಬರೋದು ಶ್ರೀಮಂತರಾಗುವುದಕ್ಕೆ ಎಂದು ಹೆಚ್ಚಿನವರು ತಿಳಿದುಕೊಂಡಿದ್ದಾರೆ.

ಇತ್ತೀಚೆಗೆ ಕೆಲ ಲೋಕಾಯುಕ್ತ ದಾಳಿ ನಡೆದಿವೆ. ಅದರ ಕಾರ್ಯವೈಖರಿ ಬಗ್ಗೆ ಜಾಸ್ತಿ ಮಾತಾಡುವುದಿಲ್ಲ. ಯಾರು ಆದರ್ಶಪ್ರಿಯರಾಗಬೇಕಿತ್ತೋ, ಅವರು ಈಗ ಜೈಲಿನಲ್ಲಿದ್ದಾರೆ. ಇದು ಯಾವ ಮಟ್ಟಕ್ಕೆ ಹೋಗಿದೆ. ದುರಾಸೆ ಕಡಿಮೆಯಾಗುವುದಿಲ್ಲ ಎಂಬುದನ್ನು ಇದು ತೋರಿಸಿಕೊಡುತ್ತದೆ ಎಂದು ಮುನಿರತ್ನ ಹೆಸರೇಳದೆ ಶಾಸಕರಾದವರು ಜೈಲಿಗೆ ಹೋಗುತ್ತಿರುವುದನ್ನು ಟೀಕಿಸಿದರು.
ಸಮಾಜದಲ್ಲಿ ದೊಡ್ಡ ಬದಲಾವಣೆ ಬರಬೇಕಿದೆ, ಆ ಬದಲಾವಣೆ ಮುಂದಿನ ಪೀಳಿಗೆಗೆ ಶಾಂತಿ, ಸೌಹಾರ್ದವನ್ನು ಬೆಳೆಸಿಕೊಡಬೇಕಿದೆ. ಮಕ್ಕಳು, ಮೊಮ್ಮಕ್ಕಳು ಸೌಹಾರ್ದತೆಯ ದಾರಿಯಲ್ಲಿ ನಡೆಯಬೇಕಿದೆ. ರಾಜಕೀಯಕ್ಕೆ ಬರುವುದಿದ್ದರೆ ಸೇವೆಗಾಗಿ ಬರಬೇಕು, ತಮ್ಮ ತಮ್ಮ ಲಾಭಕ್ಕಾಗಿ ಅಲ್ಲ. ರಾಜಕೀಯ ಎನ್ನುವುದು ಒಂದು ವ್ಯಕ್ತಿಯಲ್ಲ. ದೇಶ ಸೇವೆ ಮಾಡಲು ರಾಜಕೀಯಕ್ಕೆ ಬಂದವರನ್ನು ನಾವು ನೋಡಿದ್ದೇವೆ. ಅಂಥವರು ತಮ್ಮ ಲಾಭಕ್ಕಾಗಿ ರಾಜಕೀಯ ಮಾಡಿರಲಿಲ್ಲ. ಈಗ ರಾಜಕೀಯಕ್ಕೆ ಬರುವವರು ತಮ್ಮ ಲಾಭಕ್ಕಾಗಿ ಮಾತ್ರ ಬರುತ್ತಿದ್ದಾರೆ. ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ಆದರೆ ಆಗು ಹೋಗುಗಳು ಬೇರೆಯೇ ಇರುತ್ತವೆ ಎಂದು ಹೇಳಿದರು.
The former Lokayukta and Supreme Court judge Santosh Hegde has said that he has seen the disease of corruption in every political party and only a mass movement can prevent corruption.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm