ಬ್ರೇಕಿಂಗ್ ನ್ಯೂಸ್
23-09-24 07:46 pm HK News Desk ಕರ್ನಾಟಕ
ರಾಮನಗರ, ಸೆ 23: ಮಧ್ಯರಾತ್ರಿ ಇಬ್ಬರು ಯುವತಿಯರನ್ನು ಅಪಾರ್ಟ್ಮೆಂಟ್ಗೆ ಕರೆತಂದಿದ್ದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿಗೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ, ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ನಲ್ಲಿ ಇತ್ತೀಚೆಗೆ ನಡೆದಿದೆ.
ವರುಣ್ ಹಲ್ಲೆ ಮಾಡಿದ ಯುವಕ. ಪುನೀತ್ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಘಟನೆಗೆ ಸಂಬಂಧಿಸಿದಂತೆ, ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್.ಸಿ ಮಾಡಿಕೊಳ್ಳಲಾಗಿದೆ.
ವಕೀಲಿಕೆ ವೃತ್ತಿ ಪ್ರಾಕ್ಟೀಸ್ ಮಾಡುತ್ತಿರುವ ವರುಣ್, ಸೆ. 19ರಂ ತನ್ನ ಸ್ನೇಹಿತನೊಂದಿಗೆ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್ಗೆ ಇಬ್ಬರು ಯುವತಿಯರನ್ನು ರಾತ್ರಿ 12ರ ಸುಮಾರಿಗೆ ಕರೆ ತಂದಿದ್ದ. ಆಗ ಕರ್ತವ್ಯದಲ್ಲಿದ್ದ ಪುನೀತ್ ಅವರು, 12ರ ನಂತರ ಅಪರಿಚಿತರಿಗೆ ಅಪಾರ್ಟ್ಮೆಂಟ್ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್, ಪುನೀತ್ ಅವರ ಕೆನ್ನೆ ಮತ್ತು ತಲೆಗೆ ಹೊಡೆದಿದ್ದಾನೆ.
‘ನಾನ್ಯಾರು ಗೊತ್ತಾ? ಡಿಸಿಪಿ ಮಗ ಕಣಲೇ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ, ನಾಳೆ ಬೆಳಿಗ್ಗೆ ನೀನು ಇಲ್ಲಿ ಕೆಲಸಕ್ಕೆ ಇರ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿಸುತ್ತಾ ವರುಣ್ ಹಲ್ಲೆ ನಡೆಸುತ್ತಿರುವ ವಿಡಿಯೊವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದಾರೆ. ಅಲ್ಲದೆ, ಆತ ಅಪಾರ್ಟ್ಮೆಂಟ್ ಒಳಕ್ಕೆ ಯುವತಿಯರನ್ನು ಕರೆದೊಯ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿವೆ.
ಹಲ್ಲೆಯಿಂದಾಗಿ ಕಿವಿಗೆ ಗಾಯವಾಗಿದ್ದು, ಸರಿಯಾಗಿ ಕೇಳಿಸುತ್ತಿಲ್ಲ ಎಂದು ಪುನೀತ್ ಅವರು ನೀಡಿದ ದೂರಿನ ಮೇರೆಗೆ ಎನ್.ಸಿ ಮಾಡಿಕೊಳ್ಳಲಾಗಿದೆ. ಆರೋಪಿ ವರುಣ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#bengaluru ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ: ಸಿಎಂ ಸಂಬಂಧಿ ಎಂದು ಧಮ್ಕಿ; ಯುವಕ ಬಂಧನ #Siddaramaiah #kumbalagodu @XpressBengaluru @BlrCityPolice
— kannadaprabha (@KannadaPrabha) September 21, 2024
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು… pic.twitter.com/vHKd2xATiO
Bangalore cops file case as youth assaults guard, claims to be son of police DCP, CM relative. Karnataka police have slapped a case on a 21-year-old youth for assaulting a security guard of an apartment building for refusing entry to his friends in Bengaluru. Arrested youth has been identified as Varun.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm