ಬ್ರೇಕಿಂಗ್ ನ್ಯೂಸ್
25-09-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ತಾನು ಕಾಂಗ್ರೆಸ್ ನಾಯಕಿ, ಡಿಕೆಶಿ- ಸಿದ್ದರಾಮಯ್ಯ ಖಾಸಾ ದೋಸ್ತ್ ಇದ್ದಾರೆಂದು ಹಲವರಿಗೆ ಉದ್ಯೋಗ ದೊರಕಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿದ್ದ ಬೆಂಗಳೂರಿನ ಸಂಧ್ಯಾ ಅಲಿಯಾಸ್ ಪವಿತ್ರಾ ನಾಗರಾಜ್ ವಿರುದ್ಧ ಈಗ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರಾಪ್ ಕೇಸು ದಾಖಲಾಗಿದೆ. ಎಸ್ಡಿಪಿಐ ಮುಖಂಡ ಬಿ.ಆರ್. ಭಾಸ್ಕರ ಪ್ರಸಾದ್, ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಪವಿತ್ರಾ ನಾಗರಾಜ್ ಮತ್ತು ಪವಿತ್ರಾ ಎಂಬಿಬ್ಬರು ಮಹಿಳೆಯರ ವಿರುದ್ಧ ದೂರು ನೀಡಿದ್ದಾರೆ.
ಭಾಸ್ಕರ ಪ್ರಸಾದ್ ನೀಡಿರುವ ದೂರಿನ ಪ್ರಕಾರ, ಹೋರಾಟ- ಚಳವಳಿಗಳ ಸಂದರ್ಭದಲ್ಲಿ ಪರಿಚಯವಾಗಿದ್ದ ಪವಿತ್ರಾ ನಾಗರಾಜ್ ಜೊತೆಗೆ ಎರಡು ವರ್ಷಗಳಿಂದ ಸಂಪರ್ಕ ಹೊಂದಿದ್ದೇನೆ. 2024ರ ಆಗಸ್ಟ್ 28ರಿಂದ ತನ್ನೊಂದಿಗೆ ವಾಟ್ಸಪ್ ಸಂಪರ್ಕ ಮಾಡಿ, ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು, ಬಳಿಕ ಮಾನಹರಣ ಮಾಡುವ ಉದ್ದೇಶದಿಂದ ಬೆದರಿಕೆ ಹಾಕಿದ್ದಾಳೆ. ಆನಂತರ ತನ್ನಲ್ಲಿ ಬಂದು ಹತ್ತು ಲಕ್ಷ ಹಣಕ್ಕಾಗಿ ಪೀಡಿಸಿದ್ದಾಳೆ. ಇದೇ ಸೆ.23ರಂದು ಸಂಜೆ 3.30 ಗಂಟೆಗೆ ಶಿವಾಜಿನಗರದ ಚಿನ್ನಸ್ವಾಮಿ ಮೊದಲಿಯಾರ್ ರಸ್ತೆಯಲ್ಲಿರುವ ಕನ್ನಡ ಒನ್ ನ್ಯೂಸ್ ಚಾನೆಲ್ ಬಳಿ ಸ್ನೇಹಿತರಾದ ಪ್ರೊ.ಹರಿರಾಮ್, ರಮೇಶ್, ಪಿ.ಮೂರ್ತಿ, ಮಂಜುಳಾ ಮಹೇಶ್ ಎಂಬವರು ಬಂದಿದ್ದಾಗ ತನ್ನ ಬಗ್ಗೆ ಅಪಪ್ರಚಾರ ಮಾಡಿ, ಅವಾಚ್ಯವಾಗಿ ಮಾತನಾಡಿದ್ದಾಳೆ. ಹತ್ತು ಲಕ್ಷ ಹಣ ಕೊಡದೇ ಇದ್ದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಟ್ಟು ಮಾನಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಭಾಸ್ಕರ ಪ್ರಸಾದ್ ಶಿವಾಜಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾಸ್ಕರ ಪ್ರಸಾದ್ ಎಸ್ಡಿಪಿಐ ಪಕ್ಷದ ರಾಜ್ಯ ಸಮಿತಿ ಕಾರ್ಯದರ್ಶಿಯಾಗಿದ್ದು, ಮುಂಚೂಣಿ ಹೋರಾಟಗಳಲ್ಲಿ ಭಾಷಣಕಾರನಾಗಿ ಗುರುತಿಸಿಕೊಂಡಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷದಿಂದ ಪುಲಕೇಶಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಪವಿತ್ರಾ ನಾಗರಾಜ್ ವಿರುದ್ಧ ಇತ್ತೀಚೆಗೆ ಜ್ಞಾನ ಭಾರತಿ ಠಾಣೆಯಲ್ಲಿ ವೀಣಾ ಎಂಬ ಮಹಿಳೆ ದೂರು ನೀಡಿ, ವಂಚನೆ ಕೇಸು ದಾಖಲಿಸಿದ್ದರು. ಕಂಪನಿಗಳಲ್ಲಿ ಉದ್ಯೋಗ ತೆಗೆಸಿಕೊಡುತ್ತೇನೆಂದು ಲಕ್ಷಾಂತರ ರೂ. ಹಣ ಪಡೆದು ಹಲವರಿಗೆ ವಂಚಿಸಿರುವ ಬಗ್ಗೆ ಆರೋಪಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕಿಯೆಂದು ಹೇಳಿಕೊಂಡು ಮೋಸ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದ್ದರು. ಇದೀಗ ಅದೇ ಮಹಿಳೆಯ ವಿರುದ್ಧ ಹನಿಟ್ರ್ಯಾಪ್ ದೂರು ಕೇಳಿಬಂದಿದೆ.
Congress leader Sandhya Pavitra Nagaraj booked in honeytrap case against SDPI Bhaskar Prasad. Sandhya Pavitra also demanded 10 lakhs blackmailing Bhaskar of upaloading the video on social media.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm