ಬ್ರೇಕಿಂಗ್ ನ್ಯೂಸ್
27-09-24 06:19 pm HK News Desk ಕರ್ನಾಟಕ
ಹುಬ್ಬಳ್ಳಿ , ಸೆ 27: ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೋಲಿಸ್ ರಿಗೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದರೂ ಸಹ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದಿದ್ದೇ ಆದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಈ ಹಿಂದೆ ಬಹಳಷ್ಟು ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೇಯಾ ಎಂದು ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಅದನ್ನೇ ನಾವು ಈಗ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದಲ್ಲಿ ನ್ಯಾಯಾಲಯದ ತೀರ್ಪಿಗೆ ತಲೆ ಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಂದೆ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತಾದ ಮೇಲೆ ಪುನಃ ಸಿಎಂ ಆಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ. ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ? ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು. ಇಂಥವುದನ್ಸಂಸ್ಥೆಗಳ ಮುಚ್ಚಿಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಬಾಗಿಲ ಮೂಲಕ ಪ್ರಯತ್ನ ಮಾಡುತ್ತಿದೆ ಎಂದು ಅವರು ಇದೇ ವೇಳೆ ಆರೋಪಿಸಿದರು.
ರಾಜ್ಯದಲ್ಲಿ ಹೊಸ ಪ್ರಕರಣಗಳಲ್ಲಿ ಸಿಬಿಐ ತನಿಖೆ ಕೈಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಿರುವುದು ಸರಿಯಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸದನದಲ್ಲಿ ಕ್ಲೀನ್ ಚಿಟ್ ನೀಡಿದ್ದರು. ಇಡಿ, ಸಿಬಿಐ ತನಿಖೆ ನಾಗೇಂದ್ರ ಅವರು ತಪ್ಪಿತಸ್ಥರು ಎಂಬುದು ಬಹಿರಂಗಗೊಂಡಿದೆ. ಇದರಿಂದ ನಾಗೇಂದ್ರ ಬಳಿಕ ತಮ್ಮದೇ ಪಾಳಿ ಎಂದು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಕೈಗೊಂಡಿದೆ ಎಂದರು.
Bjp MLA Mahesh Tenginakai slams CM Siddaramaiah, says he must resign after FIR. If he's proved innocent in muda case then let him again be the CM of Karnataka he added.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm