ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm