ಬ್ರೇಕಿಂಗ್ ನ್ಯೂಸ್
27-09-24 11:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಮೇಲೆಯೂ ಅಂಥಹದ್ದೇ ಭೂಹಗರಣ ಸುತ್ತಿಕೊಳ್ಳುವ ಸಾಧ್ಯತೆ ಎದುರಾಗಿದೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ಖರ್ಗೆ ಕುಟುಂಬದ ಏಳು ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್ಗೆ ಐದು ಎಕರೆ ಭೂಮಿಯನ್ನು ಸಿಎ ಸೈಟ್ ರೂಪದಲ್ಲಿ ನೀಡಿರುವುದಾಗಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.
2014ರಲ್ಲಿ ಬಿಟಿಎಂ 4ನೇ ಸ್ಟೇಜ್ನ ಎರಡನೇ ಬ್ಲಾಕ್ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ, 2024ರಲ್ಲಿ ಬಾಗಲೂರು ಬಳಿ 5 ಎಕರೆಯಷ್ಟು ಕೆಐಎಡಿಬಿ ಭೂಮಿಯನ್ನು ಮತ್ತೆ ಇವರ ಒಡೆತನದ ಟ್ರಸ್ಟ್ಗೆ ಪರಭಾರೆ ಮಾಡಿಕೊಳ್ಳಲಾಗಿದೆ. ಈ ಎರಡೂ ನಿವೇಶನಗಳನ್ನು ಒಂದೇ ಸಂಸ್ಥೆಗೆ ಒಂದೇ ಉದ್ದೇಶಕ್ಕೆ ಈ ಟ್ರಸ್ಟ್ ಪಡೆದುಕೊಂಡಿದೆ. ಈ ಎರಡೂ ನಿವೇಶನಗಳ ಪ್ರಸ್ತುತ ಒಟ್ಟು ಮೌಲ್ಯ ಬರೋಬ್ಬರಿ 240 ಕೋಟಿ ರೂ. ಅಧಿಕ ಮೊತ್ತ ಎನ್ನಲಾಗಿದೆ.
ಇದೇ ವೇಳೆ, ಖರ್ಗೆ ಕುಟುಂಬದ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿರುವ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಶ ಮಾಹಿತಿಯೊಂದಿಗೆ ಅಭಿಪ್ರಾಯ ಕೇಳಿದ್ದಾರೆ. ಕಾನೂನು ತಜ್ಞರು ರಾಜ್ಯಪಾಲರಿಗೆ ಅಭಿಪ್ರಾಯ ಸಲ್ಲಿಕೆ ಮಾಡಿದ್ದು ಖರ್ಗೆ ಕುಟುಂಬದ ವಿರುದ್ದೆವೂ ತನಿಖೆ ಎದುರಾಗುವ ಸಾಧ್ಯತೆ ಇದೆ.
Ramesh NR, a prominent leader of the Bharatiya Janata Party (BJP) in Karnataka, has lodged a formal complaint with the Karnataka Lokayukta against Congress president Mallikarjun Kharge and several others, alleging that the Siddhartha Vihar Trust, purportedly owned by Kharge's family, is involved in a land grab scheme.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm