ಬ್ರೇಕಿಂಗ್ ನ್ಯೂಸ್
28-09-24 01:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧವೂ ಕಾಂಗ್ರೆಸ್ ಸರ್ಕಾರ ಎಫ್ಐಆರ್ ಅಸ್ತ್ರ ಪ್ರಯೋಗಿಸಿದೆ. ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಅದನ್ನು ಉಲ್ಲೇಖಿಸಿ ಸಚಿವರ ರಾಜೀನಾಮೆ ಕೇಳಲು ಮುಂದಾಗಿದೆ.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಮತ್ತು ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿಂತೆ ಶುಕ್ರವಾರ ಎಚ್ಡಿಕೆ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದ್ದಾರೆ. ಇದೇ ವೇಳೆ, ಚುನಾವಣಾ ಬಾಂಡ್ ಖರೀದಿ ವಿಚಾರದಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿದ್ದು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರಿ ನಿರ್ದೇಶನಾಲಯ ಬಳಸಿಕೊಂಡು ಸಚಿವೆ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕಟೀಲ್ ವಿರುದ್ಧ ಸುಲಿಗೆ ಆರೋಪದಲ್ಲಿ ತನಿಖೆಗೆ ಆದೇಶ ಮಾಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಎಂಬವರು ದಾಖಲಿಸಿರುವ ದೂರಿಗೆ ಸಂಬಂಧಿಸಿ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ಈ ಪ್ರಕರಣ ಕಾಂಗ್ರೆಸ್ ಪಾಲಿಗೆ ಪ್ರಖರ ಅಸ್ತ್ರವಾಗಿ ಪರಿಣಮಿಸಲಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಅವರು ರಾಜೀನಾಮೆ ಕೊಡುತ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಈಗ ಪ್ರಶ್ನಿಸಿದ್ದಾರೆ.
After the Mysore Lokayukta police filed an FIR against CM Siddaramaiah in connection with the Muda scam, the Congress government also used the FIR weapon against BJP and JDS leaders.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm