ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 01:05 pm
Udupi Correspondent
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
02-09-25 11:22 am
Mangalore Correspondent
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm