ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm