ಬ್ರೇಕಿಂಗ್ ನ್ಯೂಸ್
10-12-20 07:53 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ರೈತರ ಪ್ರತಿಭಟನೆ, ಪ್ರತಿಪಕ್ಷಗಳ ಕಲಾಪ ಬಹಿಷ್ಕಾರದ ನಡುವೆಯೇ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆಯಾಗಿದ್ದು, ಸದನದ ಅಂಗೀಕಾರ ಪಡೆಯಲಾಗಿದೆ.
ಈಗಾಗ್ಲೇ ವಿಧಾನ ಪರಿಷತ್ತಿನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಸದನದ ಅನುಮತಿ ಪಡೆಯಲಾಗಿತ್ತು. ಇದೀಗ ವಿಧಾನಸಭೆಯಲ್ಲೂ ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.


ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಈ ಕಾಯ್ದೆಯನ್ನು ರೈತ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಆದರೆ, ಇದು ರೈತರ ಪರವಾದ ಕಾಯ್ದೆ. ನಾನು ಅಡಕೆ ಬೆಳೆಗಾರನಾಗಿದ್ದು, ಎಪಿಎಂಸಿಗೆ ಮಾರಾಟ ಮಾಡುವುದಿದ್ದರೆ ಶೇ.3ರಷ್ಟು ಸೆಸ್ ಮತ್ತು ಕಮಿಷನ್ ರೂಪದಲ್ಲಿ ಹೋಗುತ್ತದೆ. ಒಂದು ಲೋಡ್ ಅಡಕೆ ಮಾರಿದರೆ ಒಂದು ಲಕ್ಷ ರೂ. ವ್ಯತ್ಯಾಸ ಆಗುತ್ತದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಹೆಚ್ಚುವರಿ ತೆರಿಗೆ ಮತ್ತು ಕಮಿಷನ್ ಉಳಿಕೆಯಾಗುತ್ತದೆ. ಇದು ರೈತ ವಿರೋಧಿಯೇ ಎಂದು ಪ್ರಶ್ನೆ ಮಾಡಿದರು.
ಬಿಎಸ್ಪಿಯ ಎನ್. ಮಹೇಶ್ ಮಾತನಾಡಿ, ಈ ಕಾಯ್ದೆಯ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಏಕಸ್ವಾಮ್ಯ ಮಾಡಿಕೊಳ್ಳಬಹುದು ಎಂಬ ಆತಂಕ ಜನರಲ್ಲಿದೆ. ಹೀಗಾಗಿ ರೈತರ ಕಾಳಜಿಯನ್ನು ಅರ್ಥ ಮಾಡಿಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಸರಕಾರ ಜಾರಿಗೊಳಿಸಬೇಕು ಎಂದು ಹೇಳಿದರು.
ಈ ಬಗ್ಗೆ ಉತ್ತರಿಸಿದ ಸಚಿವ ಸೋಮಶೇಖರ್, 2013ರಿಂದ 18ರ ಅವಧಿಯಲ್ಲಿ 60 ಬಹುರಾಷ್ಟ್ರೀಯ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ. ಎಲ್ಲಿಯೂ ರೈತರಿಗೆ ಅನ್ಯಾಯ ಆಗಿಲ್ಲ. ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರಲಿದೆ. ರೈತರು ಆತಂಕ ಪಡಬೇಕಿಲ್ಲ ಎಂದು ಹೇಳಿದರು.
The Karnataka Legislative Council late on Wednesday night passed the Karnataka Agricultural Produce Marketing (Regulation and Development) (Amendment) Bill 2020, even as Opposition Congress walked out in protest.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm