ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm