ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm