ಬ್ರೇಕಿಂಗ್ ನ್ಯೂಸ್
11-10-24 03:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆಯೂ ಆಚರಿಸುವಂತೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಾಗಾಗಿ ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಲೇಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನವೆಂಬರ್ 1 ಎಂದರೆ ನಮ್ಮ ಕರ್ನಾಟಕಕ್ಕೆ ಬಹಳ ಹೆಮ್ಮೆಯ ದಿನ. ಅಂದು ನಮ್ಮ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ದಿನ. ಹಾಗಾಗಿ ಎಲ್ಲ ಕಂಪನಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡದ ಧ್ವಜಾರೋಹಣ ಮಾಡಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶೇ. 50ರಷ್ಟು ಮಂದಿ ಹೊರಗಿನವರೇ ಇದ್ದಾರೆ. ಅವರು ಕೂಡ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು. ಆ ದಿನ ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟಕ್ಕೂ ಗೌರವ ಕೊಡಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.
ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1 ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು. ನಮಗೆ ಕನ್ನಡ ದಿನಾಚರಣೆ ಮುಖ್ಯವಾದದ್ದು. ಆ ದಿನ ಎಲ್ಲಾ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳು ಕೂಡ ಯಾರ ಮೇಲೂ ಒತ್ತಡ ಹೇರಬಾರದು. ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ. ಅದರ ಅನ್ವಯವೇ ರಾಜ್ಯೋತ್ಸವ ಆಚರಿಸಲಿದ್ದಾರೆ ಎಂದಿದ್ದಾರೆ.
Karnataka Deputy Chief Minister DK Shivakumar on Friday announced that all institutions in the state, including IT companies, factories, and other establishments, should hoist the Kannada flag on November 1.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm