ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm