ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.
ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm