ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm