ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.
ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm