ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm