ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm