ಬ್ರೇಕಿಂಗ್ ನ್ಯೂಸ್
17-10-24 12:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಕೆಎಫ್.ಡಿ (ಮಂಗನ ಕಾಯಿಲೆ) ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ವಿತ್ತೀಯ ನೆರವು ಒದಗಿಸುವಂತೆ ಕೋರಿದರು.
ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಹೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ರಕ್ತಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.
ರಾಜ್ಯದಲ್ಲಿ ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ನವೀನ ತಂತ್ರಜ್ಞಾನಗಳ ಬಗ್ಗೆ ಆಸಕ್ತಿ ತೋರಿದ ICMR ನಿರ್ದೇಶಕರು, ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನ ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ICMR ನಿರ್ದೇಶಕರು ಸಚಿವರಿಗೆ ತಿಳಿಸಿದರು. ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, NHM ಎಂ.ಡಿ ನವೀನ್ ಭಟ್ ಉಪಸ್ಥಿತರಿದ್ದರು.
Karnataka Health Minister Dinesh Gundu Rao met with Indian Council of Medical Research’s (ICMR) Director General D. Rajiv Bahl in New Delhi to discuss the progress of the vaccine for Kyasanur Forest Disease (KFD), also known as the monkeypox or monkey fever
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm