ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm