ಬ್ರೇಕಿಂಗ್ ನ್ಯೂಸ್
19-10-24 05:46 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಣ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.
The Karnataka Government has officially decided not to conduct board examinations for students in classes 5, 8, 9, and 11 in state-affiliated schools, aligning with a directive from the Supreme Court.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm