ಬ್ರೇಕಿಂಗ್ ನ್ಯೂಸ್
22-10-24 05:26 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ಮುನಿಸಿಕೊಂಡಿರುವ ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದಾರೆ. ಇದೇ ವೇಳೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆದಿದೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ದವರೇ ಆಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ. ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಅವರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಪಿ. ಯೋಗೇಶ್ವರ್, ಅದು ಸಿದ್ದರಾಮಯ್ಯ ಅವರ ದೊಡ್ಡಗುಣ. ಮುಖ್ಯಮಂತ್ರಿಗಳು ಹಾಗೆ ಮಾತಾಡಿದ್ದಾರೆ ಅಂದ್ರೆ ಸಂತೋಷವಾಗುತ್ತಿದೆ. ನಾನು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದವನು ಎಂದು ಹೇಳುವ ಮೂಲಕ
ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದು, ಅವರ ಸಮ್ಮುಖದಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ, ಸಿಪಿ ಯೋಗೀಶ್ವರ್ ಇಂದು ಸಂಜೆಯ ವರೆಗೆ ಕಾಯುತ್ತೇನೆ, ಬಿಜೆಪಿ ವರಿಷ್ಠರು ಟಿಕೆಟ್ ಕೊಟ್ಟರೆ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ. ಇಲ್ಲಾಂದ್ರೆ ಮುಂದಿನ ನಡೆಯನ್ನು ಕಾರ್ಯಕರ್ತರ ಆಶಯದಂತೆ ನಿರ್ಧರಿಸುತ್ತೇನೆ ಎಂದಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆ ದಿನವಾಗಿದ್ದು ಇನ್ನೆರಡು ದಿನ ಇರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತೀವ್ರ ಚಿಂತನೆಯಲ್ಲಿ ತೊಡಗಿದೆ.
Former Legislative Council member and BJP leader CP Yogeshwar is expected to join the Congress, with sources indicating that he will contest from Channapatna, a seat left vacant by the resignation of Union Minister HD Kumaraswamy.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm