ಬ್ರೇಕಿಂಗ್ ನ್ಯೂಸ್
26-10-24 05:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಪ್ರಕರಣದಲ್ಲಿ ಸಿಬಿಐ ಮತ್ತು ಲೋಕಾಯುಕ್ತ ಅಧಿಕಾರಿಗಳ ತನಿಖೆ ಬಳಿಕ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು.
ಬರೋಬ್ಬರಿ 44 ಕೋಟಿ ರೂ. ದಂಡ
ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ 44 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ದಂಡ ವಿಧಿಸಲಾಗಿದೆ. ಈಗಾಗಲೇ ಅನುಭವಿಸಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆಯನ್ನು ಅನುಭವಿಸಬೇಕಿದೆ. ಸತೀಶ್ ಸೈಲ್ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್, ಮಲ್ಲಿಕಾರ್ಜುನ ಶಿಪ್ಪಿಂಗ್ಗೂ ಜೈಲು ಶಿಕ್ಷೆ ವಿಧಿಸಲಾಗಿದೆ.
ನಿಯಮ ಪ್ರಕಾರ, ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಸತೀಶ್ ಸೈಲ್ಗೆ 7 ವರ್ಷದಷ್ಟು ಜೈಲು ಶಿಕ್ಷೆಯಾಗಿದ್ದರಿಂದ ಸಹಜವಾಗಿಯೇ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.
ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಭಾರೀ ಪ್ರಮಾಣದ ಕಬ್ಬಿಣದ ಅದಿರನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು. 2010ರ ಮಾ.20ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಮುಟ್ಟುಗೋಲು ಹಾಕಿ, ಬೇಲೆಕೇರಿ ಬಂದರಿನಲ್ಲಿ ದಾಸ್ತಾನು ಇರಿಸಿತ್ತು. ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಮೌಲ್ಯದ ಅದಿರು ನಾಪತ್ತೆಯಾಗಿದ್ದ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆ ದೂರು ನೀಡಿತ್ತು.
ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತವು ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ ಸರ್ಕಾರವು 2010ರ ಜೂ.23ರಂದು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ್ದಲ್ಲದೆ, 2009 ರಿಂದ ಮೇ 2010ರ ನಡುವೆ ರಾಜ್ಯದಲ್ಲಿನ ನಡೆದ ಅಕ್ರಮ ಗಣಿಗಾರಿಕೆ, ಸಾಗಣೆ ಕುರಿತು ತನಿಖೆ ನಡೆಸಲು ಸೂಚಿಸಿತ್ತು. ಅದರಂತೆ ಸಿಬಿಐ 2013ರ ಸೆ.13 ರಂದು ಕೇಸ್ ದಾಖಲಿಸಿ ತನಿಖೆ ಕೈಗೊಂಡಿತ್ತು. ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್ ಅದಿರನ್ನು 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ರವಾನೆ ಮಾಡಲಾಗಿತ್ತು ಎಂಬುದನ್ನ ಪತ್ತೆ ಮಾಡಲಾಗಿತ್ತು. ಈ ಪೈಕಿ ಸತೀಶ್ ಮಾಲಿಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ತನಿಖೆಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳ ಕೋರ್ಟಿಗೆ ಸಲ್ಲಿಸಿದ ವರದಿ ಆಧರಿಸಿ ಕೋರ್ಟ್ ಶಿಕ್ಷೆ ಜಾರಿ ಮಾಡಿದೆ.
On Saturday, October 26, the Special Court for People’s Representatives pronounced the punishment for MLA Satish Sail and others involved in the Belekeri iron ore theft case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm