ಬ್ರೇಕಿಂಗ್ ನ್ಯೂಸ್
31-10-24 10:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 31: ಮಕ್ಕಳ ಸಮೇತ ದಂಪತಿ ತೆರಳುತ್ತಿದ್ದ ಕಾರು ಅಡ್ಡಗಟ್ಟಿದ ಪುಂಡರು ದಾಳಿ ಮಾಡಿದ ಪರಿಣಾಮ ಕಾರಿನಲ್ಲಿದ್ದ ಬಾಲಕ ಗಾಯಗೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ಕಸವನಹಳ್ಳಿ ಅಮೃತ ಕಾಲೇಜು ಬಳಿ ಇಬ್ಬರು ಬೈಕ್ನಲ್ಲಿ ಬಂದ ಪುಂಡರು ಹಲ್ಲೆ ನಡೆಸಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಶಾಪಿಂಗ್ ಮುಗಿಸಿ ಕಾರಿನಲ್ಲಿ ಬರುತ್ತಿದ್ದ ಕುಟುಂಬವನ್ನು ಬೈಕ್ನಲ್ಲಿ ಹಿಂಬಾಲಿಸಿದ್ದರು. ಇಬ್ಬರು ಮಕ್ಕಳೊಂದಿಗಿದ್ದ ಅನೂಪ್ ದಂಪತಿಯ ಕಾರನ್ನು ಅಮೃತ ಕಾಲೇಜು ಬಳಿ ಆರೋಪಿಗಳು ಅಡ್ಡಗಟ್ಟಿದ್ದರು. ಬಳಿಕ ಕಾರಿನ ಗಾಜು ಇಳಿಸುವಂತೆ ಹೆದರಿಸಿದ್ದರಿಂದ ಆತಂಕಗೊಂಡ ಅನೂಪ್ ಅವರು ಗಾಜು ತೆರೆಯದೆ ಕಾರು ಓಡಿಸಿದ್ದಾರೆ. ಆಕ್ರೋಶಗೊಂಡ ಆರೋಪಿಗಳು, ಕಲ್ಲಿನಿಂದ ಕಾರಿನ ಹಿಂಭಾಗದ ಗಾಜಿಗೆ ಹೊಡೆದಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳ ಪೈಕಿ ಐದು ವರ್ಷದ ಮಗುವಿನ ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ಕಂಡು ಅನೂಪ್ ಪತ್ನಿ ಚೀರಾಡುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಗಾಯಾಳು ಮಗುವಿನ ತಂದೆ ಅನೂಪ್ ಪ್ರತಿಕ್ರಿಯಿಸಿದ್ದು "ನಾನು ಮತ್ತು ನಮ್ಮ ಕುಟುಂಬಸ್ಥರು ಮನೆಗೆ ವಾಪಸ್ ಬರುವಾಗ ಇಬ್ಬರು ಬೈಕ್ನಲ್ಲಿ ಬಂದು ನಮ್ಮ ಕಾರು ನಿಲ್ಲಿಸಿದ್ದರು. ಏನೆಂದು ಕೇಳಿದಾಗ ಏನನ್ನು ಹೇಳದೆ ಮುಂದೆ ಹೋಗಿದ್ದರು. ಮತ್ತೆ ಹಿಂಬಾಲಿಸಿ ಕಾರು ನಿಲ್ಲಿಸಿದ್ದರು. ಕಾರಿನಿಂದ ಹೊರ ಬರುವಂತೆ ಧಮ್ಕಿ ಹಾಕಿದ್ರು. ಇಳಿಯದಿದ್ದಾಗ ಓರ್ವ ಆರೋಪಿ ಕಲ್ಲು ತೆಗೆದುಕೊಂಡು ಹಿಂಬದಿ ಸೀಟ್ನ ಗಾಜಿಗೆ ಹೊಡೆದ. ಪರಿಣಾಮ ಐದು ವರ್ಷದ ಮಗುವಿಗೆ ಕಲ್ಲು ತಾಗಿದೆ. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಮಗುವಿಗೆ ತೀವ್ರ ರಕ್ತಸ್ರಾವವಾಗಿದ್ದು, ಮೂರು ಸ್ಟಿಚ್ ಹಾಕಲಾಗಿದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ" ಎಂದು ತಮಗಾದ ಕಹಿ ಘಟನೆ ಬಗ್ಗೆ ವಿವರಿಸಿದ್ದಾರೆ.
Another incident of road rage occurred in Bengaluru, where rowdies attacked a family’s car near Amrutha College in Kasavanahalli. The goons aggressively followed the family’s vehicle all the way to Aarogya Hastha Hospital, continuing their intimidation. During the attack, the… pic.twitter.com/Imd4CDGoGA
— Karnataka Portfolio (@karnatakaportf) October 30, 2024
Road rage in bangalore 5 year old boy injured as family returning after Diwali shopping attacked
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm