ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm