ಬ್ರೇಕಿಂಗ್ ನ್ಯೂಸ್
08-11-24 01:58 pm Bangalore Correspondent ಕರ್ನಾಟಕ
ಬೆಂಗಳೂರು, ನ.8: IIT/IIM/IISC /NIT ಯಂತಹ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Increase in incentive fund for SC ST children studying in national educational institutions from 1 to 2 lakhs Minister HC Mahadevappa.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm