ಬ್ರೇಕಿಂಗ್ ನ್ಯೂಸ್
12-11-24 03:12 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಗೆ ಸಂಬಂಧಿತ ದಾಖಲೆಗಳು, ಆಸ್ತಿ, ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಗೆ ದಾಳಿಯಾಗಿದೆ. ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.


ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬವರ ಬೆಳಗಾವಿ ನಿವಾಸದ ಮೇಲೆ ದಾಳಿ ನಡೆದಿದೆ. ವೆಂಕಟೇಶ್ ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆ ಹಾಕಲಾಗಿದೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪ ವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದ್ದು, 14 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆಗೆ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
Karnataka Lokayukta on Tuesday morning launched surprise raids on nine government officials in different parts of the state. The simultaneous raids are underway in as many as 40 locations belonging to the suspects, officials said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm