ಬ್ರೇಕಿಂಗ್ ನ್ಯೂಸ್
13-11-24 12:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.13: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲರ ಹೆಜ್ಜೆ ಗುರುತು ಕಂಡುಬಂದಿದೆ. ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲ್ ನಾಯಕರಾದ ಮುಂಡಗಾರು ಲತಾ ಮತ್ತು ಜಯಣ್ಣ ಅವರಿದ್ದ ನಾಲ್ವರು ನಕ್ಸಲರು ಭೇಟಿ ಕೊಟ್ಟಿದ್ದನ್ನು ತಿಳಿದ ಎಎನ್ಎಫ್ ಪಡೆ ದಾಳಿ ನಡೆಸಿದ್ದು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವೇಶದ ಗಡಿಗಳಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಇದೇ ವೇಳೆ, ಕಾಡಂಚಿನ ಗ್ರಾಮಗಳಲ್ಲಿ ಎಎನ್ಎಫ್ ಪಡೆಗಳಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕುದುರೆಮುಖ ಮುಖ, ಆಗುಂಬೆ, ಕೆರೆಕಟ್ಟೆ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲ ಮಾದರಿಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.
ಶೃಂಗೇರಿ ಮತ್ತು ಕೊಪ್ಪ ತಾಲೂಕಿನ ಗಡಿಯಲ್ಲಿರುವ ಸುಬ್ಬಗೌಡ ಎಂಬವರ ಮನೆಗೆ ನಾಲ್ವರು ನಕ್ಸಲರು ಬಂದಿದ್ದಾರೆಂಬ ಮಾಹಿತಿ ಮೇರೆಗೆ ಎಎನ್ಎಫ್ ಪೊಲೀಸರು ದಾಳಿ ನಡೆಸಿದ್ದಾರೆ. ಇದಕ್ಕೂ ಮೊದಲೇ ನಕ್ಸಲರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಮನೆಯಲ್ಲಿ ಮೂರು ಬಂದೂಕು, ಮದ್ದುಗುಂಡು, ಮಾಂಸ ಪತ್ತೆಯಾಗಿದೆ. ಮನೆಯಲ್ಲಿ ನೇತು ಹಾಕಿದ್ದ ಕ್ಯಾಲೆಂಡರ್ ಗೆ ನಕ್ಷತ್ರ ಮಾದರಿಯ ಗುರುತು ಹಾಕಿದ್ದು ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಮುಂಡಗಾರು ಲತಾ ನೇತೃತ್ವದ ನಾಲ್ವರು ಬಂದಿದ್ದರೆಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಯಪುರ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಲಾಗಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ, ನಕ್ಸಲ್ ನಿಗ್ರಹ ಪಡೆಯ ಎಸ್ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿದ್ದು ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಪ್ರಣಬ್ ಮೊಹಂತಿ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿದ್ದಾರೆ.
The anti-naxal force (ANF) has launched an extensive combing operation in the Sringeri and Koppa taluks of Chikkamagaluru district on the basis of intelligence reports suggesting renewed Maoist activity in the area, officials familiar with the matter said, adding that two have been detained for questioning.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm