ಬ್ರೇಕಿಂಗ್ ನ್ಯೂಸ್
14-11-24 02:09 pm HK News Desk ಕರ್ನಾಟಕ
ಮೈಸೂರು, ನ 14: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಬಾರಿ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಹಣ ಆಫರ್ ಮಾಡಿತ್ತು. ಈ ಹಣ ಎಲ್ಲಿಂದ ಬರುತ್ತೆ? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಹಣ ಪ್ರಿಂಟ್ ಹಾಕಿದ್ದಾರಾ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಎಂದು ಸಿಎಂ ಪ್ರಶ್ನಿಸಿದರು.
ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ. ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ?. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.
ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂಪಾಯಿ ನೀಡಿದೆ. ಈಗ ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.
ಬಿಜೆಪಿಯವರು ಗ್ಯಾರಂಟಿಯ ಹಣ ತೆಗೆದುಕೊಳ್ತಿಲ್ವಾ? ಬಿಜೆಪಿಯವರು ಉಚಿತವಾಗಿ ಬಸ್ಸಿನಲ್ಲಿ ಓಡಾಡುತ್ತಿಲ್ವಾ? ಉಚಿತ ವಿದ್ಯುತ್ ಪಡೆಯುತ್ತಿಲ್ವಾ? ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ವಾ? ನಾವು ತೆಗೆದುಕೊಳ್ತಿಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಜನರು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.
Karnataka Chief Minister Siddaramaiah on Wednesday alleged that the opposition BJP offered Rs 50 crore each to the 50 Congress MLAs to remove his government. He said none of the Congress MLAs agreed with it, due to which the BJP is now resorting to filing false cases against him.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm