ಬ್ರೇಕಿಂಗ್ ನ್ಯೂಸ್
23-11-24 02:15 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಆಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತದಾರರು ಸಹಮತ ವ್ಯಕ್ತಪಡಿಸಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಭಾರೀ ಪೈಪೋಟಿಗೆ ಸಾಕ್ಷಿಯಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸೈನಿಕ ಸಿಪಿ ಯೋಗೀಶ್ವರ್ ನಿರಾಯಾಸ ಗೆಲುವು ಕಂಡಿದ್ದಾರೆ. ಕ್ಷೇತ್ರದಲ್ಲಿ ಮತ ಎಣಿಕೆ ಮುಗಿದಿದ್ದು ಯೋಗೀಶ್ವರ್ 112388 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ 87031 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಸೋಲಾಗುತ್ತೋ ಎನ್ನುವ ಆತಂಕದಲ್ಲಿದ್ದ ಯೋಗೀಶ್ವರ್ 25,357 ಮತಗಳಿಂದ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತನ್ನ ಕ್ಷೇತ್ರದಲ್ಲಿ ಪುತ್ರನನ್ನೇ ಕಣಕ್ಕಿಳಿಸಿದ್ದ ಕುಮಾರಸ್ವಾಮಿಗೆ ಈ ಫಲಿತಾಂಶ ತೀವ್ರ ಮುಖಭಂಗ ಉಂಟು ಮಾಡಿದೆ.

ಕಾಂಗ್ರೆಸಿನ ಭದ್ರಕೋಟೆ ಎನಿಸಿಕೊಂಡಿದ್ದ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9645 ಮತಗಳಿಂದ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸಿನ ಅನ್ನಪೂರ್ಣ ಪರವಾಗಿ 93606 ಮತಗಳು ಬಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರವಾಗಿ 83961 ಮತ ಗಳಿಸಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಶಾಸಕರಾಗಿದ್ದ ಇ.ತುಕಾರಾಂ ಸಂಸದರಾಗಿದ್ದರಿಂದ ಉಪ ಚುನಾವಣೆ ನಡೆದಿದ್ದು ಅವರ ಪತ್ನಿಯನ್ನೇ ಕಣಕ್ಕಿಳಿಸಲಾಗಿತ್ತು
.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರದಲ್ಲಿ ಅವರ ಪುತ್ರ ಭರತ್ ಬೊಮ್ಮಾಯಿ ಉಪ ಚುನಾವಣೆಗೆ ಸ್ಪರ್ಧಿಸಿದ್ದರು. ಬೊಮ್ಮಾಯಿ ನಾಲ್ಕು ಬಾರಿ ಗೆದ್ದಿದ್ದರಿಂದ ಪುತ್ರನಿಗೆ ಸುಲಭ ಗೆಲುವೆಂದೇ ತಿಳಿಯಲಾಗಿತ್ತು. ಎದುರಾಳಿ ಮುಸ್ಲಿಂ ಅಭ್ಯರ್ಥಿಯಾಗಿದ್ದರಿಂದ ಬೊಮ್ಮಾಯಿ ನಿರಾಯಾಸ ಗೆಲುವು ಎನ್ನಲಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಅಚ್ಚರಿ ಎನ್ನುವಂತೆ ಗೆದ್ದಿದ್ದಾರೆ. ಭರತ್ ಬೊಮ್ಮಾಯಿ ಪರವಾಗಿ 86960 ಮತಗಳು, ಕಾಂಗ್ರೆಸಿನ ಯಾಸಿರ್ ಪಠಾಣ್ ಪರವಾಗಿ 100587 ಮತಗಳು ಬಿದ್ದಿವೆ. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ 13627 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮೇಲ್ನೋಟಕ್ಕೆ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಅತಿ ವಿಶ್ವಾಸವೇ ಇಲ್ಲಿ ಸೋಲಾಗಿಸಿದೆ.
The ruling Congress has won the by-elections to three assembly constituencies in the state, sending a clear message that voters have expressed their support for the Siddaramaiah government.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm