ಬ್ರೇಕಿಂಗ್ ನ್ಯೂಸ್
26-11-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ನ 26: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.
ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಅಂಬೇಡ್ಕರ್ ಭವನದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು:
“ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹುದ್ದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.
Congress MLA H.R. Gaviyappa has stirred controversy by suggesting the cancellation of two state guarantee schemes, citing a lack of grants for his Hospet constituency in Vijayanagar district.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm