ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್ಸ್ಟೇಬಲ್ ಎಜಾಜ್ ಖಾನ್, ಕಾನ್ಸ್ಟೇಬಲ್ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm