ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm