ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm