ಬ್ರೇಕಿಂಗ್ ನ್ಯೂಸ್
14-12-20 04:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ತಯಾರಿ ನಡೆಸಿದೆ. ಈಗಾಗ್ಲೇ ಅವಿಶ್ವಾಸ ಗೊತ್ತುವಳಿ ನೋಟೀಸ್ ನೀಡಿದ್ದು, ನಾಳೆ (ಮಂಗಳವಾರ) ನಡೆಯಲಿರುವ ಒಂದು ದಿನದ ಅಧಿವೇಶನದಲ್ಲಿ ಸಭಾಪತಿಯನ್ನು ತೆರವು ಮಾಡುವುದೇ ಬಿಜೆಪಿ ವನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಕಳೆದ ಗುರುವಾರ ಪರಿಷತ್ ಕಲಾಪವನ್ನು ದಿಢೀರ್ ಆಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು. ಪ್ರತಾಪರ ಈ ನಡೆ ಬಿಜೆಪಿಗೆ ಮುಖಕ್ಕೆ ಹೊಡೆದ ರೀತಿ ಆಗಿತ್ತು. ಹೀಗಾಗಿ ವಿಶೇಷ ಸದನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರನ್ನು ಒತ್ತಾಯ ಮಾಡಿತ್ತು. ಅವಿಶ್ವಾಸ ನೋಟೀಸ್ ನೀಡಿ, 15 ದಿನಗಳಾಗಿದ್ದು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿತ್ತು.
ಆದರೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟೀಸ್ ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದರು. ಈ ವಿಧಾನ ಪರಿಷತ್ ಮೂಲಗಳು, ಸಭಾಪತಿಯ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದರೆ, ಅದನ್ನು ಖುದ್ದಾಗಿ ಎದುರಿಸಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಆಗಬೇಕು ಎನ್ನಲಾಗುತ್ತಿದೆ.

ಈ ನಡುವೆ, ಪರಿಷತ್ ಸಭಾಪತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲವನ್ನೂ ಪಡೆದಿದೆ. ಕಾಂಗ್ರೆಸ್- ಜೆಡಿಎಸ್ ಸಂಬಂಧ ಹಳಸಿರುವುದರಿಂದ ಜೆಡಿಎಸ್ ನಾಯಕರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈ ವಿಚಾರ ಪರಿಷತ್ ಸಭಾಪತಿಯನ್ನು ಬದಲಾಯಿಸಲು ಸಹಕಾರ ಆಗಲಿದೆ.
ಈ ನಡುವೆ, ಕಳೆದ ವಾರ ವಿಧಾನಸಭೆ ಅಂಗೀಕರಿಸಿದ್ದ ಗೋಹತ್ಯೆ ವಿಚಾರವೂ ಪರಿಷತ್ ಕಲಾಪದಲ್ಲಿ ಅಂಗೀಕಾರ ಆಗಬೇಕಿದೆ. ಆದರೆ, ಅದನ್ನು ಪರಿಷತ್ ಕಲಾಪದಲ್ಲಿ ಮೊನ್ನೆ ಮಂಡನೆ ಮಾಡಿಲ್ಲ. ಅದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಪರಿಷತ್ತಿನಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯದಿದ್ದರೆ ಕಾನೂನಾಗಿ ಬರುವುದಿಲ್ಲ. ಮುಂದಿನ ಅಧಿವೇಶನಕ್ಕಾಗಿ ಕಾಯಬೇಕಾಗುತ್ತದೆ. ಹೀಗಾಗಿ ಮಂಗಳವಾರದ ಒಂದು ದಿನದ ಅಧಿವೇಶನದಲ್ಲಿ ಬಿಜೆಪಿ ಪಾಲಿಗೆ ಎರಡು ವಿಚಾರವೂ ಮಹತ್ವದ್ದಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಕೂಡ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಮೊದಲಿಗೆ ಮಂಡನೆಯಾಗಿ ಗದ್ದಲ ಏರ್ಪಟ್ಟರೆ, ಕಲಾಪವನ್ನು ಮತ್ತೆ ಮುಂದೂಡುವ ತಂತ್ರವೂ ಅಡಗಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm