ಬ್ರೇಕಿಂಗ್ ನ್ಯೂಸ್
07-12-24 05:09 pm HK News Desk ಕರ್ನಾಟಕ
ಹಾವೇರಿ, ಡಿ 07: ಪ್ರೀತಿಸಲು ಯುವತಿ ಒಪ್ಪಲಿಲ್ಲವೆಂಬ ಕಾರಣಕ್ಕೆ ನೊಂದಿದ್ದ ಯುವಕ ಬೆಂಕಿ ಹಚ್ಚಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವೀಣ ಬೆಟದೂರು (25) ಆತ್ಮಹತ್ಯೆಗೆ ಶರಣಾದ ಯುವಕ.
ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮದ ಪ್ರವೀಣ, ಹಣ್ಣಿನ ವ್ಯಾಪಾರ ಮಾಡುತ್ತಿದ್ದರು.
ತಡಸ ಗ್ರಾಮದ ತಾಯವ್ವ ದೇವಿ ದೇವಸ್ಥಾನದ ಬಳಿ ಬಂದಿದ್ದ ಪ್ರವೀಣ, ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಇವರನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ' ಎಂದು ತಡಸ ಪೊಲೀಸರು ಹೇಳಿದರು.
ಪ್ರವೀಣ ಸಾವಿನ ಸಂಬಂಧ ಯುಡಿಆರ್ (ಅಸಹಜ ಸಾವು) ದಾಖಲಿಸಿಕೊಳ್ಳಲಾಗಿದೆ. ಚಿಕಿತ್ಸೆ ಸಂದರ್ಭದಲ್ಲಿ ಪ್ರವೀಣ ಅವರಿಂದ ಹೇಳಿಕೆ ಸಹ ಪಡೆಯಲಾಗಿದ್ದು, ಅದನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ' ಎಂದು ತಿಳಿಸಿದರು.
ಪ್ರವೀಣ್ ಅವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ 21 ವರ್ಷದ ಯುವತಿ ಜೊತೆ ಸ್ನೇಹ ಬೆಳೆಸಿದ್ದರು. ನರ್ಸಿಂಗ್ ಕಾಲೇಜ್ವೊಂದರಲ್ಲಿ ಯುವತಿ ಓದುತ್ತಿದ್ದರು. ಇಬ್ಬರೂ ಆಗಾಗ ಪರಸ್ಪರ ಭೇಟಿಯಾಗುತ್ತಿದ್ದರು' ಎಂದು ಪೊಲೀಸ್ ಮೂಲಗಳು ಹೇಳಿವೆ.
ಇತ್ತೀಚೆಗೆ ಯುವತಿ ಜೊತೆಗೆ ಮಾತನಾಡಿದ ಪ್ರವೀಣ್, ತಮ್ಮನ್ನು ಪ್ರೀತಿಸುವಂತೆ ಕೋರಿದ್ದರು. ಆದರೆ, ಯುವತಿ ತಮ್ಮ ಭವಿಷ್ಯದ ದೃಷ್ಟಿಯಿಂದ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಪ್ರವೀಣ ಬೇಸರಗೊಂಡಿದ್ದರು. ತಮ್ಮನ್ನು ಪ್ರೀತಿಸುವಂತೆ ಪಟ್ಟು ಹಿಡಿದಿದ್ದರು.
ಶುಕ್ರವಾರ ಬೆಳಿಗ್ಗೆ ಯುವತಿಯನ್ನು ಪ್ರವೀಣ ಭೇಟಿಯಾಗಿದ್ದರು. ಮಾತನಾಡಬೇಕೆಂದು ಹೇಳಿ ಯುವತಿಯನ್ನು ತಡಸ ಬಳಿಯ ತಾಯವ್ವ ದೇವಸ್ಥಾನದ ಸಮೀಪದಲ್ಲಿ ಕರೆತಂದಿದ್ದರು. ಯುವತಿಗೆ ಗೊತ್ತಾಗದಂತೆ, ಮಾರ್ಗಮಧ್ಯೆಯೇ ಬಂಕ್ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು
ತಮ್ಮನ್ನು ಪ್ರೀತಿಸುವಂತೆ ಪ್ರವೀಣ ಪುನಃ ಕೋರಿದ್ದರು. ಆದರೆ, ಅದಕ್ಕೆ ಯುವತಿ ಒಪ್ಪಿರಲಿಲ್ಲ. ನಮ್ಮದು ಸ್ನೇಹವಷ್ಟೇ ಎಂಬುದಾಗಿ ಹೇಳಿದ್ದರು. ಅದರಿಂದ ಬೇಸರಗೊಂಡು ಕೂಗಾಡಿದ್ದ ಪ್ರವೀಣ, ಬಾಟಲಿಯಲ್ಲಿದ್ದ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡಿದ್ದರು. ಬಳಿಕ, ಬೆಂಕಿ ಹಚ್ಚಿಕೊಂಡಿದ್ದರು. ಸ್ಥಳೀಯರು ಸಹಾಯಕ್ಕೆ ಹೋಗುವಷ್ಟರಲ್ಲಿ, ಇಡೀ ದೇಹಕ್ಕೆ ಬೆಂಕಿ ವ್ಯಾಪಿಸಿತ್ತು. ಬೆಂಕಿ ನಂದಿಸಿ, ಪ್ರವೀಣ್ ಅವರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು' ಎಂದು ಮೂಲಗಳು ತಿಳಿಸಿವೆ.
Haveri youth sets himself on fire after girl rejects his love proposal. The Deceased has been identified as Praveen.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm