ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm