ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm