ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm