ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm