ಬ್ರೇಕಿಂಗ್ ನ್ಯೂಸ್
24-12-24 03:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಎಂಎಲ್ಸಿ ಸಿ.ಟಿ ರವಿ ನಿಂದಿಸಿದ್ದಾರೆನ್ನುವ ಪ್ರಕರಣದಲ್ಲಿ ಸದನದ ಒಳಗಡೆ ಮಹಜರು ನಡೆಸಲು ಸಭಾಪತಿ ಬಸವರಾಜ ಹೊರಟ್ಟಿ ಪೊಲೀಸರಿಗೆ ಅನುಮತಿ ನಿರಾಕರಿಸಿದ್ದು ಬೆಳಗಾವಿ ನಗರ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಅವರು ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೋರಿ ಸಭಾಪತಿಗೆ ಪತ್ರ ಬರೆದಿದ್ದಾರೆ. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಹೊರಟ್ಟಿ, ಪೊಲೀಸರು ಸದನದ ಒಳಗಡೆ ಬಂದು ಪರಿಶೀಲಿಸುವ ಹಕ್ಕು ಹೊಂದಿಲ್ಲ ಎಂದಿದ್ದಾರೆ.
ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಮಹಜರು ನಡೆಯದ ಹೊರತು ತನಿಖೆ ಅಪೂರ್ಣವಾಗಲಿದ್ದು ಒಟ್ಟು ಪ್ರಕರಣಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಕೆರಳಿಸಿದೆ. ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ ಬಳಿಕ ಸದನಕ್ಕೆ ಬೀಗ ಹಾಕಲಾಗಿದೆ. ಸದನ ಪ್ರವೇಶ ಮಾಡಲು ಪೊಲೀಸರು ಅಧಿಕಾರ ಹೊಂದಿಲ್ಲ.
ಸದನದಲ್ಲಿ ನಡೆದಿರುವ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚಿಸಿದ ಬಳಿಕ ರೂಲಿಂಗ್ ನೀಡಿದ್ದೇನೆ. ಅಲ್ಲಿಗೆ ಅದು ಮುಗಿದ ಅಧ್ಯಾಯ. ಮುಂದೆ ಎರಡೂ ಕಡೆಯಿಂದ ದೂರು ಬಂದರೆ ಮಾತ್ರ ಪರಿಶೀಲಿಸಲಾಗುವುದು. ಸದ್ಯಕ್ಕೆ ಏನೂ ಬೆಳವಣಿಗೆ ಆಗಿಲ್ಲ ಎಂದು ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿ, ನಾವು ಸ್ಥಳ ಮಹಜರಿಗೆ ಅನುಮತಿ ಕೇಳಿದ್ದೆವು. ಈವರೆಗೆ ಅನುಮತಿ ಸಿಕ್ಕಿಲ್ಲ. ನಾವು ಸದನ ಪ್ರವೇಶ ಮಾಡಿಲ್ಲ. ಸಿಟಿ ರವಿ ಅವರು ಸದನದಿಂದ ಹೊರಬಂದ ಬಳಿಕ ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
CT Ravi remarks on Lakshmi Hebbalkar, speaker Khader rejects spot mahazar inside the parliament. Ravi was taken into custody after the registration of a case under sections 75 (sexual harassment) and 79 (act intended to insult the modesty of a woman) of the Bharatiya Nyaya Sanhita at Hirebagewadi police station.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm